ಕೊರೊನಾ ವೈರಸ್ ಕಂಟ್ರೋಲ್ ನಲ್ಲಿದೆ ಎಂದ ಸಚಿವ
ಲಾಕ್ ಡೌನ್ ಪಾಲನೆ ಮಾಡುತ್ತಿರುವ ಜನರಿಂದಾಗಿ ಕೊರೊನಾ ವೈರಸ್ ಪೀಡಿತರ ಸಂಖ್ಯೆ ಹತೋಟಿಗೆ ಬರುತ್ತಿದೆ. ಹೀಗಂತ ರಾಜ್ಯದ ಸಚಿವರೊಬ್ಬರು ಹೇಳಿದ್ದಾರೆ.
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಕರ್ನಾಟಕದ 54 ಜನರು ಭಾಗಿಯಾಗಿದ್ದು, ಮಾಹಿತಿ ಇದ್ದು ಇದರಲ್ಲಿ 13 ಜನರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಎಲ್ಲವೂ ನೆಗಟಿವ್ ವರದಿ ಬಂದಿವೆ ಕೇವಲ 15 ಜನರನ್ನು ಮಾತ್ರ ಪತ್ತೆ ಹಚ್ಚಬೇಕಿದೆ ಎಂದು ಸಚಿವರು ಹೇಳಿದ್ದಾರೆ.