ಸಮ್ಮಿಶ್ರ ಸರಕಾರ ಪತನ ಯಾರಿಂದಲೂ ಸಾಧ್ಯವಿಲ್ಲ ಎಂದ ಹೆಚ್.ಡಿ.ಆರ್

ಶುಕ್ರವಾರ, 14 ಸೆಪ್ಟಂಬರ್ 2018 (19:10 IST)
ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಸರ್ಕಾರ ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜೆಡಿಎಸ್ ಶಾಸಕ ಹಾಗೂ ಸಚಿವ ಹೇಳಿದ್ದಾರೆ.

ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಎಲ್ಲವನ್ನೂ ಸರಿಪಡಿಸಲಿದ್ದಾರೆ ಎಂದು ಹಾಸನದಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಬೇರೆ ಅಲ್ಲ, ಸರ್ಕಾರ ಬೇರೆ ಅಲ್ಲಾ. ಎಲ್ಲರೂ ಒಂದೇ. ಬಿಜೆಪಿ ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ ಎಂಬುದನ್ನು ಪರೋಕ್ಷವಾಗಿ ರೇವಣ್ಣ ಒಪ್ಪಿಕೊಂಡಿದ್ದಾರೆ.

ಬಿಜೆಪಿಯವರು ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದರೆ, ಸಿಎಂ ಕುಮಾರಸ್ವಾಮಿ ತಕ್ಕ ಉತ್ತರ ನೀಡಲಿದ್ದಾರೆ.
ಇನ್ನೊಂದು ವಾರದ ನಂತರ ಹಾಸನ ಜಿಲ್ಲೆಗೆ ಸಿಎಂ ಭೇಟಿ ನೀಡಲಿದ್ದಾರೆ. ಆಗ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ಹೆಚ್.ಡಿ.ಕೆ. ನೀಡಲಿದ್ದಾರೆ ಎಂದರು.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ