ಸಚಿವ ಜಾರಕಿಹೊಳಿ ಕೆನ್ನೆ ಹಿಡಿದ ಸಿಎಂ!

ಶನಿವಾರ, 15 ಸೆಪ್ಟಂಬರ್ 2018 (16:52 IST)
ಜಾರಕಿಹೊಳಿ ಬ್ರದರ್ಸ್​ ಸಮ್ಮಿಶ್ರ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದು, ಹಲವು ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿಯೇ ಸಿಎಂ ಕುಮಾರಸ್ವಾಮಿ ಬೆಳಗಾವಿಗೆ ಭೇಟಿ ನೀಡಿದ್ದಾರೆ.

 ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜನತಾ ದರ್ಶನ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿಯವರನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಹೂ ಗುಚ್ಛ ನೀಡಿ ಬರ ಮಾಡಿಕೊಂಡರು. ಸಿಟ್ಯಾಕೊ ಸಿಡುಕ್ಯಾಕೋ ನನ ಜಾಣ… ಅನ್ನೋ ರೀತಿ ಸಿಎಂ ಕುಮಾರಸ್ವಾಮಿಯವರು ಸಚಿವ ರಮೇಶ್​ ಜಾರಕಿಹೊಳಿಯವರ ಕೆನ್ನೆ ಹಿಡಿದುಕೊಂಡರು.

ಈ ವೇಳೆ ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​​ ಮತ್ತಿತರರು ಇದ್ದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ