ಕೊಡಗು ಜನರ ಹಿತದೃಷ್ಟಿಯಿಂದ ಸಚಿವ ಸ್ಥಾನ ಕೊಡಬೇಕು- ಶಾಸಕ ಕೆ.ಜಿ.ಬೋಪಯ್ಯ

ಶುಕ್ರವಾರ, 13 ಡಿಸೆಂಬರ್ 2019 (11:19 IST)
ಮಡಿಕೇರಿ: ಕೊಡಗು ಜನರ ಹಿತದೃಷ್ಟಿಯಿಂದ ಸಚಿವ ಸ್ಥಾನ ಕೊಡಬೇಕು ಎಂದು ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಹೇಳಿದ್ದಾರೆ.



ಜಿಲ್ಲೆಗೆ ಸಚಿವ ಸ್ಥಾನ ಕೊಡಬೇಕು ಎಂಬುದನ್ನು ಒಪ್ಪುತ್ತೇನೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷ ಕೊಡುವ ಜವಬ್ದಾರಿ ನಿರ್ವಹಿಸಲು ಸದಾ ಸಿದ್ಧ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.


ಉಪಚುನಾವಣೆಯ ಗೆಲುವಿನ  ನಂತರ ಬಿಜೆಪಿ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಶುರುವಾಗಿದ್ದು, ಇದೀಗ ಸಚಿವ ಸ್ಥಾನದ ಆಕಾಂಕ್ಷಿಗಳು ಸಚಿವ ಸ್ಥಾನಕ್ಕಾಗಿ ದಂಗಾಲು ಬಿದ್ದಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ