ಸಚಿವ ಕೆ.ಎಸ್.ಈಶ್ವರಪ್ಪಗೆ ಎದುರಾಗಿದೆ ಕೊರೊನಾ ಕಂಟಕ

ಮಂಗಳವಾರ, 14 ಜುಲೈ 2020 (10:19 IST)
Normal 0 false false false EN-US X-NONE X-NONE

ಶಿವಮೊಗ್ಗ : ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಅವರ ಕುಟುಂಬಸ್ಥರಿಗೆ  ಇದೀಗ ಕೊರೊನಾ ಭೀತಿ ಎದುರಾಗಿದೆ.

ಶಿವಮೊಗ್ಗದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ಕೆ.ಎಸ್.ಈಶ್ವರಪ್ಪ ಅವರ ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿನ ನಿವಾಸದಲ್ಲಿರುವ ಮನೆ ಕೆಲಸದವನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಹಿನ್ನಲೆಯಲ್ಲಿ ಕೆ.ಎಸ್.ಈಶ್ವರಪ್ಪ ಹಾಗೂ ಅವರ ಕುಟುಂಬಸ್ಥರಿಗೆ  ಕೊರೊನಾ ಸೋಂಕು ತಗುಲಿರುವ ಭೀತಿ ಉಂಟಾಗಿದ್ದು, ಸಚಿವ ಈಶ್ವರಪ್ಪ ಮತ್ತು  ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ