ಚಿರತೆ ದಾಳಿಗೆ ಬಲಿಯಾದ ಬಾಲಕಿ ಮನೆಗೆ ಸಚಿವ ಮಾಧುಸ್ವಾಮಿ ಭೇಟಿ

ಭಾನುವಾರ, 1 ಮಾರ್ಚ್ 2020 (11:56 IST)
ತುಮಕೂರು : ಚಿರತೆ ದಾಳಿಗೆ ಬಾಲಕಿ ಬಲಿಯಾದ ಹಿನ್ನಲೆಯಲ್ಲಿ ಮೃತ ಬಾಲಕಿ ಮನೆಗೆ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.


3 ವರ್ಷದ ಮಗು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ಚಿರತೆ ಮಗುವನ್ನು ಕೊಂದು ತಿಂದ ಘಟನೆ  ತುಮಕೂರು ಜಿಲ್ಲೆಯ ಕಣಕುಪ್ಪೆ ಗ್ರಾಮದಲ್ಲಿ ನಡೆದಿದೆ.


ಈ ಹಿನ್ನಲೆಯಲ್ಲಿ ಇಂದು ಮೃತ ಬಾಲಕಿ ಮನೆಗೆ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಮಾಧುಸ್ವಾಮಿಗೆ ಡಿಸಿ ರಾಕೇಶ್ ಕುಮಾರ್ ಸಾಥ್ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ