ಬಿಎಸ್ವೈ ಜನ್ಮದಿನ ಆಚರಿಸಿದ ಸಚಿವ ನಾರಾಯಣಗೌಡ

ಗುರುವಾರ, 27 ಫೆಬ್ರವರಿ 2020 (21:09 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಜನ್ಮದಿನವನ್ನು ಸಚಿವ ನಾರಾಯಣಗೌಡ ಹಾಗೂ ಪಕ್ಷದ ಮುಖಂಡರು ಆಚರಣೆ ಮಾಡಿದರು.

ಕೆ.ಆರ್. ಪೇಟೆ ತಾಲ್ಲೂಕಿನ ಪುತ್ರ, ನಾಡಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 78ನೇ ಜನ್ಮದಿನ ಅಂಗವಾಗಿ ಸಚಿವ ನಾರಾಯಣಗೌಡ ಅವರಿಂದ ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಲಾಯಿತು.  

ಕೃಷ್ಣರಾಜಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಸಚಿವ ಡಾ.ನಾರಾಯಣಗೌಡ ಅವರು ಮುಖ್ಯಮಂತ್ರಿ ತಾಲ್ಲೂಕಿನ ಸುಪುತ್ರ ಬಿ.ಎಸ್.ಯಡಿಯೂರಪ್ಪ ಅವರ 78 ನೇ ಹುಟ್ಟು ಹಬ್ಬದ ಅಂಗವಾಗಿ ಹಣ್ಣುಹಂಪಲು ವಿತರಿಸಿ ರೋಗಿಗಳು ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ