ಕ್ಷೇತ್ರ ಬದಲಾವಣೆಗೆ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ– ಸಚಿವ ಮಹದೇವಪ್ಪ

ಶನಿವಾರ, 6 ಜನವರಿ 2018 (14:55 IST)
ಬೆಂಗಳೂರಿನ ಸಿ.ವಿ.ರಾಮನ್‍ನಗರ, ನೆಲಮಂಗಲ ಮುಂತಾದ ಕಡೆ ಸ್ಪರ್ಧಿಸುವಂತೆ ಆಹ್ವಾನಿಲಾಗಿದೆ. ಆದರೆ, ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದರಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ ಮಾಡುವ ಕುರಿತು ಪ್ರತಿಕ್ರಿಯಿಸಿದ ಅವರು, ಸದಸ್ಯಕ್ಕೆ ಟಿ.ನರಸಿಪುರ ಕ್ಷೇತ್ರದ ಶಾಸಕನಾಗಿದ್ದು, ಮುಂದಿನ ಚುನಾವಣೆಯ ಬಗ್ಗೆ ಹೈಕಮಾಂಡ್‌ ತೀರ್ಮಾನಿಸಲಿದೆ ಎಂದಿದ್ದಾರೆ.

ನಂಜನಗೂಡಿನ ಜನರು ಕೂಡ ಸ್ಪರ್ಧಿಸಲು ಹೇಳಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಇದರ ಬಗ್ಗೆ ನಿರ್ಧಾರ ಮಾಡುತ್ತೇನೆ. ನನ್ನ ಮಗ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಜನರ ಒತ್ತಾಯ ಬಂದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಾನೆ. ಜನರಿಗೆ ಒಳ್ಳೆಯದು ಮಾಡುವ ಉದ್ದೇಶವಿದ್ದರೆ ಯಾರು ಬೇಕಾದರೂ ರಾಜಕೀಯಕ್ಕೆ ಬರಲಿ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ