ಕಾಂಗ್ರೆಸ್ ನಾಯಕರ ವಿರುದ್ದ ಮುಂದುವರೆದ ಸಚಿವ ಶ್ರೀರಾಮುಲು ಟ್ಟೀಟ್ ವಾರ್

ಭಾನುವಾರ, 16 ಅಕ್ಟೋಬರ್ 2022 (20:38 IST)
ಕೈ ನಾಯಕರ ಸಮಾವೇಶ ಮಾಡಿದ ಮುನಿಸಿಪಲ್ ಮೈದಾನ ಸಚಿವ ಶ್ರೀರಾಮುಲು ಸ್ವಚ್ಛಗೊಳಿಸಿದ್ದಾರೆ.ನಾವು ಮಾತ್ರ ಸ್ವಚ್ಛವಾಗಿದ್ದರೆ ಸಾಲದು,ನಮ್ಮ ಸುತ್ತಮುತ್ತಲಿನ ಪರಿಸರವೂ ಅಷ್ಟೇ ಶುಭ್ರವಾಗಿರಬೇಕು ಎಂಬ ಕಾರಣಕ್ಕಾಗಿ ದೇಶದ ಪ್ರಧಾನಿ ಜೀ ಸ್ವಚ್ಛ ಭಾರತ್ ಯೋಜನೆ ಪ್ರಾರಂಭಿಸಿದ್ದರು. ಕಡೆ ಪಕ್ಷ ಕಾಂಗ್ರೆಸ್ ನಾಯಕ  ಸ್ಥಳೀಯ ನಾಯಕರಿಗಾದರೂ ಇದರ ಬಗ್ಗೆ ಅರಿವು ಮೂಡಿಸದಿರುವುದು ನನಗೆ ಆಶ್ಚರ್ಯ ಉಂಟು ಮಾಡಿದೆ.ಶನಿವಾರ ಬಳ್ಳಾರಿಯ ಮುನಿಸಿಪಲ್ ಮೈದಾನದಲ್ಲಿ ಭಾರತ್ ಜೋಡೋ ಸಮಾವೇಶದಲ್ಲಿ ದೊಡ್ಡ ದೊಡ್ಡ ಭಾಷಣ ಬಿಗಿದು ವೀರಾವೇಶದ ಮಾತುಗಳನ್ನಾಡಿದ್ದ ಕಾಂಗ್ರೆಸ್ ನಾಯಕರಿಗೆ ಕನಿಷ್ಟ ಪಕ್ಷ ತಾವು ಮಾಡಿದ್ದ ಹೊಲಸನ್ನು ಸ್ವಚ್ಛಗೊಳಿಸಬೇಕೆಂಬ ಸಾಮಾನ್ಯ ಜ್ಞಾನವೂ ಇದ್ದಂತೆ ಕಾಣಲಿಲ್ಲ.ಸ್ವತಃ ನಾನು ಹಾಗೂ ನಮ್ಮ ಪಕ್ಷದ ಸ್ವಚ್ಛಗೊಳಿಸುವ ಮೂಲಕ ಕೈ ಕೊಳಕನ್ನು ತೆಗೆದುಹಾಕಿದೆವು.ಮೈದಾನವನ್ನ ಸ್ವಚ್ಚಗೊಳಿಸಿ ಕಾಂಗ್ರೆಸ್ ನಾಯಕರ ವಿರುದ್ದ ಶ್ರೀರಾಮುಲು ಕಿಡಿಕಾರಿದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ