ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ" ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

ಭಾನುವಾರ, 18 ಸೆಪ್ಟಂಬರ್ 2022 (20:24 IST)
ಮೈಸೂರು ನಗರದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ್ ಅಂಗವಾಗಿ ಹಮ್ಮಿಕೊಂಡಿದ್ದ "ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ" ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು ಮುನ್ನೂರು ಅಧಿಕ ಸ್ವಯಂ ಕಾರ್ಯಕರ್ತರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದರು. ‘ನಮ್ಮ ಪಾರಂಪರಿಕ ನಗರವನ್ನು ಸ್ವಚ್ಛವಾಗಿಡುವ ಮೂಲಕ ಸುಂದರಗೊಳಿಸೋಣ’ ಈ ಅಭಿಯಾನದ ಧ್ಯೇಯ ವಾಕ್ಯವಾಗಿತ್ತು.ಬಾಂಡ್ಲಿ ಹಿಡಿದು ಗೂಡ್ಸ್ ಆಟೋ ಗೆ ಕಸ ತುಂಬಿದ ಸಚಿವರು.ಮೇಯರ್ ಶಿವಕುಮಾರ್ ಹಾಗೂ ಉಪ ಮೇಯರ್ ರೂಪ ಯೋಗೇಶ್ ಸಚಿವರಿಗೆ ಸಾಥ್ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ