ಡ್ರಾಪ್ ಕೊಡುವ ನೆಪದಲ್ಲಿ ಕಾಡಿಗೆ ಕೊಂಡೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಶನಿವಾರ, 15 ಅಕ್ಟೋಬರ್ 2016 (10:15 IST)
ಅಪ್ರಾಪ್ತೆ ಮೇಲೆ ಯುವಕರಿಬ್ಬರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಹಾಸನದಲ್ಲಿ ನಡೆದಿದ್ದು, ಬಹಳ ತಡವಾಗಿ ಬೆಳಕಿಗೆ ಬಂದಿದೆ.
ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ರಘು ಮತ್ತು ಆತನ ಸ್ನೇಹಿತ ಎಂದು ಗುರುತಿಸಲಾಗಿದೆ. 
 
ಪ್ರಮುಖ ಆರೋಪಿ ರಘು ಬಾಲಕಿಯ ಗ್ರಾಮದವನೇ ಆಗಿದ್ದು, ಮೊದಲಿನಿಂದಲೂ ಅವರಿಬ್ಬರಿಗೆ ಪರಿಚಯವಿತ್ತು ಎಂದು ತಿಳಿದು ಬಂದಿದೆ. 
 
ಗುರುವಾರ ಬಸ್ ನಿಲ್ದಾಣದ ಬಳಿ ನಿಂತಿದ್ದ ಬಾಲಕಿಯನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದ ರಘು ಕಾಡಿಗೆ ಕೊಂಡೊಯ್ದು ತನ್ನ ಸ್ನೇಹಿತನ ಜತೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ.
 
ಅಸ್ವಸ್ಥಗೊಂಡ ಬಾಲಕಿಯನ್ನು ಇಬ್ಬರು ಸ್ನೇಹಿತರು ಬಸ್ ನಿಲ್ದಾಣದ ಬಳಿ ಬಿಟ್ಟು ಪರಾರಿಯಾಗಿದ್ದಾರೆ.
 
ಸದ್ಯ ಬಾಲಕಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ