ತೀರ್ಥಹಳ್ಳಿಯಿಂದ 14 ವರ್ಷದ ಬಾಲಕಿಯನ್ನು ಅಪಹರಿಸಿದ್ದ ಮೂವರು ಅಪರಿಚಿತ ಯುವಕರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ನಂತರ ವಿಷ ಕುಡಿಸಿ ಆಕೆಯನ್ನು ಕೊಲ್ಲಲು ಪ್ರಯತ್ನಿಸಿದ್ದಾರೆ. ಅದೇ ದಿನ ಸಂಜೆ ಅನಂದಗಿರಿಬೆಟ್ಟದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಕಳೆದ ಶುಕ್ರವಾರ ಸಂಜೆ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.