ಚುನಾವಣಾ ಪ್ರಚಾರದಿಂದ ದೂರ ಉಳಿದ ಕಾಂಗ್ರೆಸ್ ನ ಅಲ್ಪಸಂಖ್ಯಾತ ನಾಯಕರು

ಗುರುವಾರ, 28 ನವೆಂಬರ್ 2019 (10:55 IST)
ಬೆಂಗಳೂರು : ಡಿಸೆಂಬರ್ 5 ರಂದು ಉಪಚುನಾವಣೆಯ ಹಿನ್ನಲೆ ಚುನಾವಣಾ ಪ್ರಚಾರದಿಂದ ದೂರ ಉಳಿದಿರುವ ಮೂಲಕ ಅಲ್ಪಸಂಖ್ಯಾತ ನಾಯಕರು ಕಾಂಗ್ರೆಸ್ ಗೆ ಕೈ ಕೊಟ್ಟಿದ್ದಾರೆ ಎಂಬ ಮಾತು ಕೇಳಿಬಂದಿದೆ.


ಕೇವಲ ಮಾಜಿ ಸಚಿವ ಯು.ಟಿ.ಖಾದರ್ ಅವರು ಮಾತ್ರ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಿದ್ದು, ಜಮೀರ್ ಅಹಮ್ಮದ್ ಅನಾರೋಗ್ಯದ ನೆಪವೊಡ್ಡಿ ಪ್ರಚಾರದಿಂದ ದೂರ ಉಳಿಸದಿದ್ದಾರೆ ಎನ್ನಲಾಗಿದೆ. ಅಲ್ಲದೇ ವಿದೇಶ ಪ್ರಯಾಣ ಬೆಳೆಸಿ  ಎಂಎಲ್ ಸಿ ಸಿಎಂ ಇಬ್ರಾಹಿಂ ಕೂಡ ಪ್ರಚಾರದಿಂದ ದೂರ ಉಳಿದಿದ್ದಾರೆ. 

 

ಅಲ್ಲದೇ ಕಾಂಗ್ರೆಸ್ ನಾಯಕ ಹ್ಯಾರಿಸ್ ಉಸ್ತುವಾರಿ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ನಾಯಕರು ಅಲ್ಪ ಸಂಖ್ಯಾತ ಅಭ್ಯರ್ಥಿ ಪರ ಹಾಗೂ ಅಲ್ಪ ಸಂಖ್ಯಾತರ ಕ್ಷೇತ್ರದಲ್ಲೂ ಪ್ರಚಾರ ಮಾಡದೆ ದೂರ ಉಳಿದಿದ್ದಾರೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ