ಸಿದ್ದರಾಮಯ್ಯರ ಆಡಳಿತಾವಧಿಯಲ್ಲಿ ಅವ್ಯವಹಾರ : ಸುಧಾಕರ್

ಮಂಗಳವಾರ, 24 ಜನವರಿ 2023 (11:30 IST)
ಬೆಂಗಳೂರು : ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಸಾಧನೆ ಅಂದರೆ ಅದು ಭ್ರಷ್ಟಾಚಾರ ಮಾತ್ರ. ಭ್ರಷ್ಟಾಚಾರ ಅನ್ನುವ ಪದದ ಹುಟ್ಟಿಗೆ ಕಾರಣವಾಗಿರುವುದೇ ಕಾಂಗ್ರೆಸ್ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕಿಡಿಕಾರಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 60 ವರ್ಷ ದೇಶವಾಳಿದ ಕಾಂಗ್ರೆಸ್ ಯಾವುದೇ ಯೋಜನೆ ಮಾಡಿದರೂ ಅದರಲ್ಲಿ ಭ್ರಷ್ಟಾಚಾರ ಇರುತ್ತದೆ. ಅವರಿಗೆ ಅದು ರಕ್ತಗತವಾಗಿ ಬಂದಿದೆ.

ಉಳಿದವರು ಕೂಡ ಹಾಗೆಯೇ ಎಂದು ಅಂದುಕೊಂಡು ಅತ್ಯುತ್ತಮ ಆಡಳಿತ ನೀಡುತ್ತಿರುವ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ