ಆನೆಕಲ್ : ಆನ್ಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಲೋಕೇಶ್ ಅವರಿಗೆ ಈ ಕಾರು ಸೇರಿದ್ದು, ಇಬ್ಬರು ಮುಸುಕುಧಾರಿಗಳು ಈ ದುಷ್ಕೃತ್ಯವನ್ನು ಎಸಗಿದ್ದಾರೆ.
ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಕಾರಿಗೆ ಬೆಂಕಿಯಿಟ್ಟರು. ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದ್ದು, ದುಷ್ಕರ್ಮಿಗಳ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚುನಾವಣೆ ಗಲಾಟೆಗೆ ಸಂಬಂಧಿಸಿದಂತೆ ಈ ದುಷ್ಕೃತ್ಯವನ್ನು ಎಸಗಲಾಗಿದೆ.
ಕಾರನ್ನು ಮನೆ ಮುಂದೆ ನಿಲ್ಲಿಸಿದ್ದಾಗ ಪೆಟ್ರೋಲ್ ಕ್ಯಾನ್ವೊಂದರಿಂದ ಪೈಪ್ ಮೂಲಕ ಕಾರಿಗೆ ಪೆಟ್ರೋಲ್ ಸುರಿದು ನಂತರ ಕಾರಿಗೆ ಬೆಂಕಿ ಹಚ್ಚಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.