ಮುಂಡ್ಕೂರು ಜಾತ್ರೆಯಲ್ಲಿ ಪಟಾಕಿ ಸಿಡಿದು ಅವಘಡ

ಸೋಮವಾರ, 20 ಫೆಬ್ರವರಿ 2023 (16:53 IST)
ಪಟಾಕಿ ಸಿಡಿದು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರಿನ ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಸಂದರ್ಭ ರಾತ್ರಿ ನಡೆದ ಬ್ರಹ್ಮರಥೋತ್ಸವದ ಸಂದರ್ಭ ಸಿಡಿಮದ್ದು ಪ್ರದರ್ಶನ ನಡೆದಿದ್ದು, ಈ ವೇಳೆ ದಾಸ್ತಾನು ಇರಿಸಿದ್ದ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಬಿದ್ದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹತ್ ಜನಸಂಖ್ಯೆ ಸೇರುವ ಜಾತ್ರಾ ಸಮಯದಲ್ಲಿ ಯಾವುದೇ ಪ್ರಥಮ ಚಿಕಿತ್ಸಾ ಕೊಠಡಿ ಅಥವಾ ಅಂಬುಲೆನ್ಸ್ ವ್ಯವಸ್ಥೆ ಕೂಡ ಮಾಡದಿರುವುದು ಆಡಳಿತ ಮಂಡಳಿಯ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಪಟಾಕಿ ಸಿಡಿದು ಅವಾಂತರ ಸೃಷ್ಟಿಸಿದ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ