ಘಟನಾ ಸ್ಥಳಕ್ಕೆ ಜಿಲ್ಲೆಯ ಸಿಪಿಐ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣವನ್ನು ಪರಿಶೀಲಿಸಿದ್ದಾರೆ. ಮುದ್ದೆ ಬಿಹಾಳ ಠಾಣೆಯಲ್ಲಿ ಪ್ರಕಱಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಇನ್ನು ಈ ಬಗ್ಗೆ ಮೃತ ಬಾಲಕಿಯ ಪೋಷಕರು ಪ್ರತಿಕ್ರಿಯಿಸಿದ್ದು, ತಮ್ಮ ಪುತ್ರಿ ಕಾಣೆಯಾದ ಬಗ್ಗೆ ಇಲ್ಲಿನ ಮುದ್ದೆಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಕಾಣೆಯಾದ ದಿನದಂದೇ ಮುಂದಾಗಿದ್ದೆವು. ಆದರೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಿಲ್ಲ ಎಂದು ಪೊಲೀಸರನ್ನು ದೂರಿದ್ದಾರೆ. ಅಲ್ಲದೆ ಪೊಲೀಸರ ವರ್ತನೆಗೆ ಗ್ರಾಮದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.