ಮುಡಾ ಕಡತ ನಾಪತ್ತೆ: ಸಚಿವ ಭೈರತಿ ಸುರೇಶ್ ವಿರುದ್ಧ ದೂರು

Sampriya

ಸೋಮವಾರ, 7 ಅಕ್ಟೋಬರ್ 2024 (18:19 IST)
Photo Courtesy X
ಬೆಂಗಳೂರು: ಮುಡಾ ಹಗರಣ ಸಂಬಂಧ ಸಚಿವ ಭೈರತಿ ಸುರೇಶ್ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ‌ ದಾಖಲೆ ತೆಗೆದುಕೊಂಡು ಹೋಗಿದ್ದಾರೆಂದು  ಸ್ನೇಹಮಯಿ ಕೃಷ್ಣ ಆರೋಪಿಸಿ, ದೂರು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣವು ತಮ್ಮ ಸ್ಥಾನಕ್ಕೆ ದೊಡ್ಡ ಸಂಕಷ್ಟ ತಂದಿದ್ದು, ಇದೀಗ ಸಚಿವ ಭೈರತಿ ಸುರೇಶ್​ ಅವರಿಗೂ ಬಿಸಿ ಮುಟ್ಟುವ ಸಾಧ್ಯತೆಯಿದೆ. ಿನ್ನೂ ಕಡತ ನಾಪತ್ತೆ ಪ್ರಕರಣ ಸಂಬಂಧ ಲೋಕಾಯುಕ್ತದ ಈ ಹಿಂದಿನ ಎಸ್‌ಪಿ ಸುಜಿತ್ ವಿರುದ್ಧವೂ ದೂರು ನೀಡಿದ್ದಾರೆ.

 ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್​​ ಮೋಹನ್​​ ಅವರಿಗೆ ಲಿಖಿತ ರೂಪದಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಸಚಿವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಜುಲೈ 26ರಂದು ಭೈರತಿ ಸುರೇಶ್ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ‌ ದಾಖಲೆ‌ ಕೊಂಡೊಯ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಆ ದಾಖಲೆಗಳನ್ನು ಇಟ್ಟುಕೊಂಡು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಮಾಡಿದ್ದಾರೆ. ದಾಖಲೆಗಳನ್ನು ತೆಗೆದುಕೊಂಡು‌ ಹೋಗಲು ಲೋಕಾಯುಕ್ತ ಎಸ್‌ಪಿ ಕೂಡಾ ಸಹಕರಿಸಿದ್ದಾರೆ. ಹೀಗಾಗಿ ಅವರ ವಿರುದ್ಧವೂ ಸ್ನೇಹಮಯಿ ಕೃಷ್ಣ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ