ತಪ್ಪು ಗ್ರಹಿಕೆಯಿಂದ ಗಲಾಟೆ ಆಗಿದ್ದು- ಯಡಿಯೂರಪ್ಪ

ಮಂಗಳವಾರ, 28 ಮಾರ್ಚ್ 2023 (15:04 IST)
ತಪ್ಪು ಗ್ರಹಿಕೆಯಿಂದ ಬಂಜಾರ ಸಮುದಾಯದ ಜನರು ಶಿಕಾರಿಪುರದಲ್ಲಿ ನಮ್ಮ ನಿವಾಸದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಹಾಗಾಗಿ ಯಾರ ಮೇಲೂ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಘಟನೆಯ ಹಿಂದೆ ಯಾರ ಪಿತೂರಿ ಇದೆ ಎನ್ನುವುದನ್ನು ಈ ಹಂತದಲ್ಲಿ ಹೇಳಲ್ಲ. ಇನ್ನೆರಡು ದಿನದಲ್ಲಿ ಶಿಕಾರಿಪುರಕ್ಕೆ ತೆರಳಿ ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಿ ಅವರ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ