ಶರಣಾಗಲು ಶಾಸಕ ಹ್ಯಾರಿಸ್ ಪುತ್ರನ ನಾಟಕ!

ಸೋಮವಾರ, 19 ಫೆಬ್ರವರಿ 2018 (08:49 IST)
ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನ ಬಂಧನ ಇದುವರೆಗೆ ಸಾಧ್ಯವಾಗದ ಹಿನ್ನಲೆಯಲ್ಲಿ ಪೊಲೀಸ್ ಆದಿಕಾರಿಗಳ ಎತ್ತಂಗಡಿ ಪ್ರಹಸನ ನಡೆದಿದೆ.
 

ನಿನ್ನೆ ರಾತ್ರಿ 8 ಗಂಟೆಯವರೆಗೆ ಮೊಹಮ್ಮದ್ ನಲಪಾಡ್ ಬಂಧನಕ್ಕೆ ಪೊಲೀಸರಿಗೆ ಗಡುವು ವಿಧಿಸಲಾಗಿತ್ತು. ಆದರೆ ಆತ ತಲೆಮರೆಸಿಕೊಂಡು ಇದುವರೆಗೆ ಪತ್ತೆಯಾಗಿಲ್ಲ ಎಂದೇ ಪೊಲೀಸರು ಹೇಳುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ. ಇಂದು ಮಲಪಾಡ್ ನೇರವಾಗಿ ಪೊಲೀಸರಿಗೆ ಶರಣಾಗಬಹುದು ಎಂಬ ನಿರೀಕ್ಷೆಯಿದೆ. ಒಂದು ವೇಳೆ ಆತ ಇಂದು ಕೋರ್ಟ್ ಗೆ ಹಾಜರಾದರೆ ಜಾಮೀನಿನ ಮೇಲೆ ಬಿಡುಗಡೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ