ಸಂತ್ರಸ್ತರ ಮನವಿ ಪತ್ರ ಓದಿದ ಶಾಸಕ ಜಾರಕಿಹೊಳಿ

ಮಂಗಳವಾರ, 5 ನವೆಂಬರ್ 2019 (18:18 IST)
ಸಂತ್ರಸ್ತರ ಮನವಿ ಪತ್ರವನ್ನು ಓದಿದ್ದಾರೆ ಶಾಸಕ ಜಾರಕಿಹೊಳಿ.

ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ ಎ ಮತ್ತು ಬಿ ಕೆಟಗರಿ ಮನೆಗಳ ನಿರ್ಮಾಣಕ್ಕೆ ಪರಿಹಾರ ನೀಡುವುದರ ಜತೆಗೆ ಸಿ ಕೆಟಗರಿಯ ಎಷ್ಟೇ ಮನೆಗಳಿದ್ದರೂ ಇತರೆ ವಸತಿ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ಬೆಳಗಾವಿ ಜಿಲ್ಲೆಯ ಪ್ರವಾಹ ಬಾಧಿತ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಗೋಕಾಕ ತಾಲ್ಲೂಕಿನ ಲೋಳಸೂರ ಗ್ರಾಮದಲ್ಲಿ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡಿದರು.

ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಲೋಳಸೂರ ಗ್ರಾಮ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಎ, ಬಿ ಮತ್ತು ಸಿ‌ ಕೆಟಗರಿ ವಿಂಗಡಣೆ ಸಮರ್ಪಕವಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಆದ್ದರಿಂದ ಇಂತಹ ಆರೋಪ ಇರುವ ಕಡೆಗಳಲ್ಲಿ ಮರು ಪರಿಶೀಲನೆ ನಡೆಸಬೇಕು ಎಂದರು.

ಈ ಕುರಿತು ಗ್ರಾಮಸ್ಥರು ಸಿದ್ಧಪಡಿಸಿದ್ದ ಮನವಿಪತ್ರವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸ್ವತಃ ಓದಿ ಸಚಿವ ಸೋಮಣ್ಣ ಅವರಿಗೆ ಸಲ್ಲಿಸಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ