'ಕೈ'ಗೆ ಬೈ ಹೇಳ ಹೊರಟ ಶಾಸಕ ಮಾಲೀಕಯ್ಯ ಗುತ್ತೇದಾರ

ಸೋಮವಾರ, 20 ಜೂನ್ 2016 (11:09 IST)
ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕಲಬುರ್ಗಿಯ ಗಾಣಗಾಪೂರದಲ್ಲಿ ಬೆಂಬಲಿಗರೊಂದಿಗೆ ಚರ್ಚೆ ನಡೆಸುತ್ತಿರುವ ಶಾಸಕ ಮಾಲೀಕಯ್ಯ ಗುತ್ತೇದಾರ, ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರಲು ಒಲವು ವ್ಯಕ್ತಪಡಿಸಿದ್ದಾರೆ.
 
ಅಫ್ಜಲಪುರ ಕ್ಷೇತ್ರದ ಶಾಸಕರಾಗಿರುವ ಮಾಲೀಕಯ್ಯ ಗುತ್ತೇದಾರ ಸತತವಾಗಿ 5 ಭಾರಿ ಶಾಸಕರಾಗಿ ಆಯ್ಕೆಯಾಗಿದ್ದು, ರಾಜ್ಯ ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ