ಶಾಸಕ ರಾಜುಗೌಡ ಹುಟ್ಟುಹಬ್ಬದ ಹಿನ್ನಲೆ; ಬ್ಯಾನರ್ ಕಟ್ಟಲು ಹೋದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

ಶುಕ್ರವಾರ, 27 ಡಿಸೆಂಬರ್ 2019 (11:05 IST)
ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಶಾಸಕರೊಬ್ಬರ ಬರ್ತ್ ಡೇ ಗೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಿನ್ನೆ ತಡರಾತ್ರಿ ಗಲಾಟೆ ನಡೆದಿದೆ. 


ಇಂದು ಬಿಜೆಪಿ ಶಾಸಕ ರಾಜುಗೌಡ ಹುಟ್ಟುಹಬ್ಬದ ಹಿನ್ನಲೆ ನಿನ್ನೆ ರಾತ್ರಿ ಬ್ಯಾನರ್ ಕಟ್ಟಲು ತೆರಳಿದ್ದ ಬಿಜೆಪಿ ಕಾರ್ಯಕರ್ತರ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಈ ಹಿನ್ನಲೆಯಲ್ಲಿ  ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ ಆರೋಪ ಮಾಡಿದ್ದಾರೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ