ಶಾಸಕ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್​​​​ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌

ಗುರುವಾರ, 3 ನವೆಂಬರ್ 2022 (17:42 IST)
ಶಾಸಕ ರೇಣುಕಾಚಾರ್ಯ ಸಹೋದರ ರಮೇಶ್​​ರವರ​ ಪುತ್ರ ಚಂದ್ರಶೇಖರ್​​​​ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ ಸಿಕ್ಕಿದೆ. 
ನನ್ನ ಸಹೋದರನ ಪುತ್ರ ಚಂದ್ರಶೇಖರ್‌ನನ್ನ ಕಿಡ್ಯ್ನಾಪ್‌ ಮಾಡಿದ್ದಾರೆ ಎಂದು ದಾವಣಗೆರೆಯಲ್ಲಿ ಶಾಸಕ M.P.ರೇಣುಕಾಚಾರ್ಯ ಸ್ಫೋಟಕ ಮಾಹಿತಿ ನೀಡಿದ್ದಾರೆ. ಕಳೆದ ಒಂದು ತಿಂಗಳಿಂದ ಚಂದ್ರುನನ್ನ ಯಾರೋ ಹಿಂಬಾಲಿಸುತ್ತಿದ್ರು. ವ್ಯವಸ್ಥಿತವಾಗಿ ಸಂಚು ರೂಪಿಸಿ ಅವನನ್ನು ಕಿಡ್ನ್ಯಾಪ್‌ ಮಾಡಿದ್ದಾರೆ. ಚಂದ್ರಶೇಖರ್‌ ಕಣ್ಮರೆಯ ಹಿಂದೆ ಒಂದು ಷಡ್ಯಂತ್ರವಿದೆ ಎಂದು ತಿಳಿಸಿದರು. ಚಂದ್ರಶೇಖರ್​​​ ನಾಪತ್ತೆಯಾಗಿ 3 ದಿನವಾದ್ರೂ ಚಂದ್ರಶೇಖರ್‌ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪೊಲೀಸರು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸೇರಿ ಹಲವೆಡೆ ಹುಡುಕಾಟ ನಡೆಸ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ