ಕಾಂಗ್ರೆಸ್ ನಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ; ಕೈ ನಾಯಕರ ವಿರುದ್ಧ ಮುನಿಸಿಕೊಂಡ ಶಾಸಕ ಸತೀಶ್ ಜಾರಕಿಹೊಳಿ

ಸೋಮವಾರ, 11 ನವೆಂಬರ್ 2019 (11:27 IST)
ಬೆಳಗಾವಿ : ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಮತ್ತೆ ಅಸಮಾಧಾನ ಭುಗಿಲೆದಿದ್ದು, ಕೈ ನಾಯಕರ ವಿರುದ್ಧ ಶಾಸಕ ಸತೀಶ್ ಜಾರಕಿಹೊಳಿ ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.



ಜಾರಕಿಹೊಳಿ ಕುಟುಂಬದ ಬದಲಿಗೆ ಬೇರೆಯವರಿಗೆ ಮಣೆ ಹಾಕಲು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಚಿಂತನೆ ನಡೆಸಿದ್ದು, ಈ ಹಿನ್ನಲೆಯಲ್ಲಿ ನಿನ್ನೆ ನಡೆದ ಸಭೆಗೆ ಗೈರಾದ ಶಾಸಕ ಸತೀಶ್ ಜಾರಕಿಹೊಳಿ ಇಂದಿನ ಸಭೆಯಿಂದಲೂ ದೂರ ಉಳಿದಿದ್ದಾರೆ ಎನ್ನಲಾಗಿದೆ.


ಬಿಜೆಪಿ ನಾಯಕರಾದ ರಾಜು ಕಾಗೆ, ಅಶೋಕ್ ಪೂಜಾರಿ ಪಕ್ಷಕ್ಕೆ ಕರೆತರಲು ಸಿದ್ಧತೆ ನಡೆಸುತ್ತಿರುವ ಹಿನ್ನಲೆಯಲ್ಲಿ ಇದರ ಜೊತೆ ಎಲ್ಲವನ್ನು ಕೈ ನಾಯಕರೇ ನಿರ್ಧಾರ ಮಾಡಲಿ ಎಂದು ಅವರು ಗರಂ ಆಗಿ ಹೇಳಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ