ಆತ್ಮಹತ್ಯೆ ಯತ್ನಕ್ಕೆ ಪೊಲಿಸರೇ ಪ್ರೇರಣೆ ಎಂದ ಶಾಸಕ!

ಮಂಗಳವಾರ, 8 ಜನವರಿ 2019 (17:41 IST)
ನಾನು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿಲ್ಲ.  ನಾನು ಅಸಹಾಯಕತೆಯಿಂದ ಆತ್ಮಹತ್ಯೆ ಯತ್ನಿಸಿದೆ. ಆತ್ಮಹತ್ಯೆ ಯತ್ನಕ್ಕೆ ಪೊಲಿಸರೇ ಪ್ರೇರಣೆ ಎಂದ ಶಾಸಕ ಆರೋಪ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿರುವ ಶಾಸಕ ಗೂಳಿಹಟ್ಟಿ ಶೇಖರ್, ಘಟನೆಗೆ ನೇರ ಹೊಣೆ ಎಸ್ಪಿ ಡಾ. ಅರುಣ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಾಗಿದ್ದಾರೆ. ಇವರ ವಿರುದ್ಧ ಇದೇ 22 ರಂದು ಬೃಹತ್ ಪ್ರತಿಭಟನೆ ಮಾಡುತ್ತೇವೆ.
ಎಸ್ಪಿ ವಿರುದ್ದ ಕಾನೂನಿನ ಹೋರಾಟ ಮಾಡುತ್ತೇನೆ ಎಂದರು.

ಸದನದಲ್ಲಿ ಹಕ್ಕು ಚ್ಯುತಿ ಮಂಡನೆಯನ್ನು ಮಂಡಿಸುತ್ತೇನೆ ಎಂದು ಚಿತ್ರದುರ್ಗದಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿಕೆ ನೀಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ