ಇದೇ ವೇಳೆ ನೀರಿಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಧಾಕರ್ ಕೂಡ ಮಾತನಾಡಿ, ನಮ್ಮ ಕ್ಷೇತ್ರದ ಜನರೂ ಕೂಡ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲಾ ವ್ಯಾಪ್ತಿಯ ಜನರು 20 ವರ್ಷಗಳಿಂದಲೂ ಕೂಡ ಫ್ಲೋರೈಡ್ ಮಿಶ್ರಿತ ನೀರನ್ನೇ ಕುಡಿಯುತ್ತಿದ್ದು, ಹಲವು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಹಾಗಾಗಿ ಆದಷ್ಟು ಬೇಗ ನೀರು ಕೊಟ್ಟಲ್ಲಿ ಒಳಿತು ಎಂದು ಮನವಿ ಮಾಡಿಕೊಂಡರು.