ಕ್ಷೇತ್ರದ ಜನರಿಗೆ ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ ಶಾಸಕ ಶಿವರಾಂ ಹೆಬ್ಬಾರ್

ಸೋಮವಾರ, 15 ಜುಲೈ 2019 (12:42 IST)
ಬೆಂಗಳೂರು : ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಅವರು ಫೇಸ್‍ಬುಕ್‍ನಲ್ಲಿ ತಮ್ಮ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಉದ್ದೇಶಿಸಿ  ತಮ್ಮ ರಾಜೀನಾಮೆಗೆ ಕಾರಣವೆನೆಂಬುದನ್ನು ತಿಳಿಸಿದ್ದಾರೆ.




ಶಾಸಕ ಶಿವರಾಂ ಹೆಬ್ಬಾರ್ ಅವರು ಆತ್ಮೀಯ ಕಾರ್ಯಕರ್ತರಲ್ಲಿ ಮತ್ತು ತಮ್ಮ ಕ್ಷೇತ್ರದ ಮತದಾರ ಬಾಂಧವರಲ್ಲಿ ಇತ್ತೀಚಿನ ಹಠಾತ್ ರಾಜಕೀಯ ಬೆಳವಣಿಗೆ ಹಾಗೂ ಗೊಂದಲಗಳ ಕುರಿತು ಕ್ಷಮೆ ಯಾಚಿಸುತ್ತಾ ಫೇಸ್‍ಬುಕ್‍ನಲ್ಲಿ ಸುರ್ದೀಘವಾದ ಪತ್ರ ಬರೆದಿದ್ದಾರೆ.


‘ಕ್ಷೇತ್ರದ ಅಭಿವೃದ್ಧಿಗಾಗಿ ನಾನು ರಾಜೀನಾಮೆ ಸಲ್ಲಿಸಿದ್ದೇನೆ. ನಾನು ಯಾವುದೇ ರೀತಿಯ ಆಮಿಷಗಳಿಗೆ ಬಲಿಯಾಗಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ಕ್ಷೇತ್ರಕ್ಕೆ ಒಳ್ಳೆದಾಗಲಿದೆ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ