‘ಶಾಸಕ ಸೋಮಶೇಖರ್ ರೆಡ್ಡಿ ಬಂಧನ’

ಭಾನುವಾರ, 5 ಜನವರಿ 2020 (16:23 IST)

ಮುಸ್ಲಿಮರು ಹಾಗೂ ಕಾಂಗ್ರೆಸ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಳ್ಳಾರಿಯ ಶಾಸಕರಿಗೆ ಹೀಗಾಗಿದೆ.
 

ಶಾಸಕ ಸೋಮಶೇಖರ್ ರೆಡ್ಡಿಯವರು ಬಳ್ಳಾರಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧಿಸುವವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಿದ್ದರು.

ಶಾಸಕ ರೆಡ್ಡಿ ಹೇಳಿಕೆ ಖಂಡಿಸಿ ಬಳ್ಳಾರಿಯಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ರು. ಇದೀಗ ರಾಯಚೂರಿನಲ್ಲೂ ಪ್ರತಿಭಟನೆ ಮುಂದುವರಿದಿದೆ.

ಶಾಸಕ ಸೋಮಶೇಖರ್ ರೆಡ್ಡಿಯನ್ನು ಬಂಧನ ಮಾಡುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದ್ದಾರೆ. ರೆಡ್ಡಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದು, ಅವರನ್ನು ಬಂಧಿಸಿ ಶಾಸಕತ್ವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹ ಮಾಡಿದ್ದಾರೆ ಪ್ರತಿಭಟನಾಕಾರರು.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ