ಶಾಸಕ ಸುನೀಲ್ ಕುಮಾರ ಉಗ್ರಗಾಮಿ- ವಿವಾದ ಹುಟ್ಟುಹಾಕಿದ ರಮನಾಥ ರೈ

ಶನಿವಾರ, 27 ಜನವರಿ 2018 (08:44 IST)

ಬಿಜೆಪಿ ಶಾಸಕ ಸುನೀಲ್ ಕುಮಾರ ಉಗ್ರಗಾಮಿ ಎಂದು ಸಚಿವ ರಮಾನಾಥ ರೈ ಅವರು ವಿವಾದ ಹುಟ್ಟುಹಾಕಿದ್ದಾರೆ.

ಶಾಸಕ ಸುನೀಲ್ ಕುಮಾರ ಕ್ಷೇತ್ರ ಕಾರ್ಕಳದ ಅತ್ತೂರು ಚರ್ಚಿಗೆ ಬಂದಿದ್ದ ಅವರು, ಸುನೀಲ್ ಕುಮಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುನೀಲ್ ಕುಮಾರ್ ಎಷ್ಟೇ ಮಾತನಾಡಿದರೂ, ನನ್ನನ್ನು ಏನೂ ಮಾಡಲು ಆಗಲ್ಲ. ನನ್ನ ಕ್ಷೇತ್ರಕ್ಕೆ ಬಂದು ಸುಳ್ಳು ಆರೋಪ ಮಾಡಿದ್ದಾರೆ. ಕನಿಷ್ಠ ಜ್ಞಾನವಿಲ್ಲದ ಸುನೀಲ್ ಕುಮಾರ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮತೀಯವಾದ ಮನಸ್ಸಿನಲ್ಲಿ ತುಂಬಿಕೊಂಡಿರುವ ಸುನೀಲ್ ಕುಮಾರ ಸೂಕ್ಷ್ಮ ಪ್ರದೇಶವಾದ ಬಂಟ್ವಾಳದಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡುವುದು ಸರಿಯಲ್ಲ. ಜೋಳಿಗೆ ಹಿಡಿದು ಬಂದಿದ್ದ ಸುನೀಲ್ ಎಷ್ಟು ಸಂಪತ್ತು ಮಾಡಿಕೊಂಡಿದ್ದಾರೆ ಎಂಬುದು ಗೊತ್ತಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ