ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಗೆ ಅಲ್ಲಂ ವೀರಭದ್ರಪ್ಪ, ಆರ್.ಬಿ.ತಿಮ್ಮಪೂರ್, ರಿಜ್ವಾನ್ ಅರ್ಷದ್ ಮತ್ತು ವೀನಾ ಅಚ್ಚಯ್ಯ ಅವರ ಹೆಸರು ಅಂತಿಮಗೊಂಡಿದೆ.
ಮುಖಂಡರ ಸಭೆಯ ನಂತರ ಮಾತನಾಡಿದ ಕುಡುಚಿ ಕ್ಷೇತ್ರದ ಬಿಎಸ್ಆರ್ಪಿಸಿ ಶಾಸಕ ಪಿ.ರಾಜೀವ್, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷೇತ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇವೆ ಎಂದು ಭರವಸೆ ನೀಡಿದ ಮೇರೆಗೆ ನಾವು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.