ಶಾಸಕ ಎಂ.ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅರ ಬೆಂಬಲಿಗರು ಮೆಟ್ರೋ ರೈಲ್ವೆ ನಿಲ್ದಾಣಕ್ಕೆ ತೆರಳಿ ಪ್ರತಿಭಟನೆ ತೋರಿದ್ದರಿಂದ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ಥವಾಗಿತ್ತು.
ಕೃಷ್ಣಪ್ಪ ಬೆಂಬಲಿಗರು ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ಆರಂಭಿಸಿದ್ದರಿಂದ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಪಕ್ಷದ ಹೈಕಮಾಂಡ್ ಎಂಪಿ ಚುನಾವಣೆ ಸಂದರ್ಭದಲ್ಲಿ ನನಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿ ಹೋಗಿದೆ. ಹೈಕಮಾಂಡ್ ಏನು ಮಾಡುತ್ತದೆಯೋ ಕಾದು ನೋಡಬೇಕು ಎಂದು ಶಾಸಕ ಕೃಷ್ಣಪ್ಪ ಹೇಳಿದ್ದಾರೆ.
ಇಂದು ಸಂಜೆ ನೂತನ ಸಚಿವ ಸಂಪುಟದ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಸಚಿವ ಸ್ಥಾನ ವಂಚಿತ ಶಾಸಕರ ಬೆಂಬಲಿಗರು ಭಾರಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ