ಇಂದಿನ ಸಂಸತ್ ಭವನದಲ್ಲಿ ನಡೆಯುತ್ತಿರುವ ಅಧಿವೇಶನ ಸಂಭರ್ಭದಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರದ ಭೂ ಸ್ವಾಧೀನ ಕಾಯಿದೆ ಬಗ್ಗೆ ಚಕಾರವೆತ್ತಿತ್ತು. ಈ ವೇಳೆ ಮಾತನಾಡಿದ ಮೋದಿ, ಚುನಾವಣೆಗೂ ಮುನ್ನ ಇದೇ ಕಾಯಿದೆಯನ್ನಿಟ್ಟುಕೊಂಡು ಕಾಂಗ್ರೆಸ್ ಲೋಕಸಭೆಯ ಚುನಾವಣಾ ಪ್ರಚಾರಕ್ಕಿಳಿದಿತ್ತು. ಆದರೆ ಜನರನ್ನು ಮರಳು ಮಾಡಲು ಸಾಧ್ಯವಾಗದ ಕಾರಣ ಕಾಂಗ್ರೆಸ್ ಸಂಪೂರ್ಣವಾಗಿ ಸೋಲನ್ನು ಅನುಭವಿಸಿದೆ. ಅಲ್ಲದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಯೋಜನೆಯ ವೈಫಲ್ಯತೆ ಕಾಂಗ್ರೆಸ್ ಸೋಲಿಗೆ ಹಿಡಿದ ಕೈಗನ್ನಡಿ. ಯೋಜನೆಯನ್ನು ಕಾರ್ಯಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಆದರೂ ಅದರಲ್ಲಿ ಕೆಲ ವ್ಯತ್ಯಾಸಗಳನ್ನು ತಂದು ನಾವು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಿದ್ದೇವೆ ಎಂದರು.
ಬಳಿಕ, ಯುಪಿಎ ಸರ್ಕಾರ ಬಡತನ ನಿರ್ಮೂಲನೆಗಾಗಿ ಜಾರಿಗೊಳಿಸಿದ್ದ ಮತ್ತೊಂದು ಯೋಜನೆ ಮನ್ರೇಗಾ ಯೋಜನೆಯನ್ನೂ ಕೂಡ ನಮ್ಮ ಸರ್ಕಾರ ಮುಂದುವರಿಸಲಿದ್ದು, ಬಡತನ ನಿರ್ಮೂಲನೆಯೇ ನಮ್ಮ ಗುರಿಯಾಗಿದೆ. ಅಲ್ಲದೆ ಬಡತನವನ್ನು ಕಿತ್ತೊಗೆಯಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದರು.