ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೇ ಗೋವಿನ ರಕ್ಷಣೆ ಮಾಡುತ್ತಾರೆ ಎನ್ನುತ್ತಾರೆ. ಮತ್ತೊಂದೆಡೆ ತಾವೇ ಗೋವುಗಳನ್ನು ಸಾಗಾಟ ಮಾಡುತ್ತಾರೆ. ಪುನಃ ಅವರೇ ಗೋ ಸಾಗಾಟ ಮಾಡುವವರನ್ನು ಕೊಲೆ ಮಾಡುತ್ತಾರೆ. ಇದು ಬಿಜೆಪಿ ನಾಯಕರ ದ್ವಂದ್ವ ನೀತಿಯನ್ನು ತೋರುತ್ತದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.