ಕಾವೇರಿ ನದಿಯಿಂದ ತಮಿಳುನಾಡಿಗೆ ಅಕ್ಟೋಬರ್ 1 ರಿಂದ 6 ರವರೆಗೂ ಒಟ್ಟು 36 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನಿನ್ನೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆದರೆ, ಈ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಯುವ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀರಾವರಿ ವಿಷಯಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಇದೀಗ, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧಿಸಿ ಅವರು ಅಹೋರಾತ್ರಿ ನಿರಶನ ಕೈಗೊಂಡಿರುವುದು ವಿಶೇಷವೇ ಸರಿ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು.