ನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್, ಮೋದಿ, ತಾವೇ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.
ಪ್ರಧಾನಿ ಮೋದಿ ಎರಡು ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹೇಳಿದ್ದರು. ಒಂದು ವೇಳೆ, ಉದ್ಯೋಗ ಸೃಷ್ಟಿಸಿದ್ದರೆ ಭಾರತ ಅಭಿವೃದ್ಧಿ ಪಥದತ್ತ ಸಾಗುತ್ತಿತ್ತು. ಒಂದು ವೇಳೆ, ಆರ್ಥಿಕ ಅಭಿವೃದ್ಧಿ ಬಯಸಿದ್ದಲ್ಲಿ ಬಡವರಿಗೆ ಲಾಭವನ್ನು ವರ್ಗಾಯಿಸಬಹುದಿತ್ತು. ಕೇವಲ ದೊಡ್ಡ ಉದ್ಯಮಿಗಳಿಗೆ ಗುತ್ತಿಗೆ ನೀಡಿದ್ದರಿಂದ ಅವರು ಲಾಭ ಪಡೆಯುತ್ತಿದ್ದಾರೆ. ಬಡವರು ಬಡವರಾಗಿಯೇ ಉಳಿದಿದ್ದಾರೆ ಎಂದು ಕಿಡಿಕಾರಿದರು.