ಮೋದಿ ಅವರು ವೈಭವೀಕರಣದಲ್ಲಿ ಮಾಧ್ಯಮಗಳು- ಕುಮಾರಸ್ವಾಮಿ

ಭಾನುವಾರ, 4 ಫೆಬ್ರವರಿ 2018 (23:12 IST)

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮಾಧ್ಯಮಗಳು ವೈಭವೀಕರಿಸಿ ತೋರಿಸುತ್ತಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಳೆದ ಮೂರೂವರೆ ವರ್ಷಗಳಿಂದ ನರೇಂದ್ರಮೋದಿ ಅವರು ರಾಜ್ಯಕ್ಕೆ ಮಾಡಿರುವ ಅನ್ಯಾಯವನ್ನು ಯಾರೂ ಮಾಡಿಲ್ಲ. ಆದರೆ, ಅದನ್ನು  ಮಾಧ್ಯಮಗಳು ತೋರಿಸದೇ ವೈಭವೀಕರಿಸುತ್ತಿವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಈಗಿನ ಮುಖ್ಯಮಂತ್ರಿ ಜನರ ದುಡ್ಡನ್ನು ದುರುಪಯೋಗ ಪಡಿಸಿಕೊಂಡಷ್ಟು ಯಾರೂ ದುರುಪಯೋಗ ಮಾಡಿಲ್ಲ ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ