ಸಂಪುಟದಿಂದ ಕೈಬಿಡಲಾಗಿದೆ ಎನ್ನುವ ವರದಿಗಳು ಆಧಾರರಹಿತ: ಸಚಿವ ಸಿದ್ದೇಶ್ವರ್

ಮಂಗಳವಾರ, 5 ಜುಲೈ 2016 (17:41 IST)
ನನ್ನನ್ನು ಕೇಂದ್ರ ಸಂಪುಟದಿಂದ ಕೈಬಿಟ್ಟಿದ್ದಾರೆಂದು ನನ್ನ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದರಿಂದ, ನನ್ನ ಮನಸ್ಸಿಗೆ ಬೇಸರವಾಗಿದೆ. ಒಂದು ವಾರದಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಕೇಂದ್ರ ರಾಜ್ಯ ಖಾತೆ ಸಚಿವ ಜಿ.ಎಂ.ಸಿದ್ದೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 
ಪ್ರಧಾನ ಮಂತ್ರಿ ನರೇಂದ್ರ ಮೋದಿಯಾಗಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಲಿ ನನಗೆ ರಾಜೀನಾಮೆ ನೀಡಿ ಎಂದು ಸೂಚಿಸಿಲ್ಲ. ಒಂದು ವೇಳೆ ಅವರು ರಾಜೀನಾಮೆ ನೀಡುವಂತೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡಲು ಸಿದ್ಧ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ನನ್ನನ್ನು ಕೇಂದ್ರ ಸಂಪುಟದಿಂದ ಕೈಬಿಟ್ಟಿದ್ದಾರೆಂದು ನನ್ನ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಪ್ರಧಾನಿ ಅವರು ಸೂಚಿಸುವವರೆಗೂ ಮಂತ್ರಿ ಸ್ಥಾನದಲ್ಲೇ ಮುಂದುವರೆಯೂವೆ ಎಂದು ಕೇಂದ್ರ ರಾಜ್ಯ ಖಾತೆ ಸಚಿವ ಜಿ.ಎಂ.ಸಿದ್ದೇಶ್ವರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ