ಮಹದಾಯಿ ನದಿ ನೀರಿನ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ನ್ಯಾಯಾಧೀಕರಣದ ಮುಖ್ಯಸ್ಥರು ಸಲಹೆ ನೀಡಿದ್ದಾರೆ. ಜೊತೆಗೆ ಪ್ರಧಾನಿಯವರ ಮಧ್ಯಸ್ಥಿಕೆಗೆ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯವೂ ಆಗಿದೆ. ಈ ಕುರಿತು ಪ್ರಧಾನಿಯವರ ಗಮನ ಸೆಳೆಯಾಯಿತು. ಅವರು ನಮ್ಮ ಮಾತುಗಳನ್ನು ಆಲಿಸಿದರೇ ಹೊರತು ಯಾವುದೇ ಭರವಸೆ ಕೊಡಲಿಲ್ಲ.