ಚನ್ನಪಟ್ಟಣಕ್ಕೆ ಮೋದಿ : ದಶಪಥ ಹೆದ್ದಾರಿ ಮಾರ್ಗ ಬದಲಾವಣೆ

ಶುಕ್ರವಾರ, 28 ಏಪ್ರಿಲ್ 2023 (07:33 IST)
ರಾಮನಗರ: ಇದೇ ಏ.30ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ  ಬೆಂಗಳೂರು-ಮೈಸೂರು  ಎಕ್ಸ್ಪ್ರೆಸ್ವೇಯ ಯ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ಚನ್ನಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ಬಳಿ ಮೋದಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಏಪ್ರಿಲ್ 30ರ ಬೆಳಗ್ಗೆ 11ರಿಂದ ಸಂಜೆ 4 ಗಂಟೆವರೆಗೆ ಮಾರ್ಗ ಬದಲಾವಣೆ ಮಾಡಿ ರಾಮನಗರ ಹಾಗೂ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಅಂದು ರಾಮನಗರದ ಬಿಡದಿಯಿಂದ ಮದ್ದೂರಿನವರೆಗೂ ದಶಪಥ ಹೆದ್ದಾರಿಯ ಸಂಚಾರಕ್ಕೆ ನಿರ್ಬಂಧವಿರಲಿದೆ. ಎಕ್ಸ್ಪ್ರೆಸ್ ಹೈವೇ ಹಾಗೂ ಸರ್ವೀಸ್ ರಸ್ತೆಗಳಲ್ಲಿ ವಾಹನಗಳ ಓಡಾಟಕ್ಕೆ ನಿಷೇಧ ಹೇರಲಾಗಿದೆ. ಈ ಹಿನ್ನೆಲೆ ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ವಾಹನ ಸವಾರರಿಗೆ ಪರ್ಯಾಯ ಮಾರ್ಗಸೂಚಿ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ