ರಾಜ್ಯದ 28 ಜಿಲ್ಲೆಗಳಲ್ಲಿ ಮುಂಗಾರು ಕೊರತೆ

ಭಾನುವಾರ, 16 ಜುಲೈ 2023 (06:18 IST)
ಬೆಂಗಳೂರು : ರಾಜ್ಯಕ್ಕೆ ಮಳೆ ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ.
 
ಕಳೆದ ಜೂನ್ ತಿಂಗಳಲ್ಲಿ ಬರೋಬ್ಬರಿ 56% ಮಳೆ ಕೊರತೆಯಾಗಿತ್ತು. ಜುಲೈ ತಿಂಗಳ ಮೊದಲ 11 ದಿನಗಳವರೆಗೆ 34% ಮಳೆ ಕೊರತೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 18%, ಉತ್ತರ ಒಳನಾಡಿನಲ್ಲಿ 55% ಮಳೆ ಕಡಿಮೆಯಾಗಿದೆ. ಉತ್ತರ ಒಳನಾಡಿನ 13 ಜಿಲ್ಲೆಗಳಲ್ಲಿ ಮಳೆಗೆ ಬರ ಬಂದಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 77% ಮಳೆ ಕೊರತೆಯಾಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ 74% ಮಳೆ ಕಡಿಮೆ ಬಿದ್ದಿದೆ. ಇದರಲ್ಲಿ ಮೂರು ಜಿಲ್ಲೆಯಲ್ಲಿ ಮಳೆ ಕೊರತೆ ಕಾಡಿದೆ.

ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ