ಆಸ್ತಿಯಲ್ಲಿ ಪಾಲು ಕೊಡದ ಅತ್ತೆ- ಮಾವ: ರೊಚ್ಚಿಗೆದ್ದ ಸೊಸೆಯಿಂದ ಅಡಿಕೆ ಸಸಿಗಳ ನೆಲಸಮ

Sampriya

ಮಂಗಳವಾರ, 9 ಏಪ್ರಿಲ್ 2024 (14:20 IST)
Photo Courtesy Facebook
ದಾವಣಗೆರೆ: ತಾಲ್ಲೂಕಿನ ಅವರಗೊಳ್ಳ ಗ್ರಾಮದಲ್ಲಿ ಅತ್ತೆ-ಮಾವನ ಮೇಲಿನ‌ ಸಿಟ್ಟಿಗೆ ಸೊಸೆ 40ಕ್ಕೂ ಹೆಚ್ಚು ಅಡಿಕೆ ಸಸಿಗಳನ್ನು ಕಡಿದು ಹಾಕಿರುವ ಘಟನೆ ನಡೆದಿದೆ.

ಚಿದಾನಂದಸ್ವಾಮಿ, ಶಿವನಾಗಮ್ಮ ದಂಪತಿಯ ಹಿರಿಯ ಪುತ್ರ ಕುಮಾರಸ್ವಾಮಿ ಅವರ ಪತ್ನಿ ರೂಪಾ ಕೆಲ ವರ್ಷಗಳಿಂದ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದಳು. ಈ ವಿಚಾರದಲ್ಲಿ ಹಲವು ಬಾರಿ ಜಗಳ ನಡೆದಿತ್ತು.

ತಮಗೆ ಸೇರಬೇಕಿದ್ದ ಆಸ್ತಿಯಲ್ಲಿ ಪಾಲು ಕೊಡಲು ಅತ್ತೆ-ಮಾವ ಹಿಂದೇಟು ಹಾಕುತ್ತಿದ್ದಾರೆ ಎಂದು ರೊಚ್ಚಿಗೆದ್ದ ರೂಪಾ ಅಡಿಕೆ ಸಸಿಗಳನ್ನು ನೆಲಸಮ ಮಾಡಿದ್ದಾಳೆ. ಎಲ್ಲ ಸಸಿಗಳನ್ನು ಮೂರು ವರ್ಷಗಳ ಹಿಂದೆ ನಡೆಲಾಗಿತ್ತು.

ರೂಪಾ ನಮ್ಮನ್ನು ಸರಿಯಾಗಿ ನೋಡಿಕೊಳ್ಳದೆ, ಹಲ್ಲೆ ಮಾಡುತ್ತಿದ್ದಾಳೆ. ನಮ್ಮ ಬಳಿ 8 ಲಕ್ಷ ರೂಪಾಯಿ ‌ಪಡೆದು ಮನೆ ಕಟ್ಟಿಸಿಕೊಂಡಿದ್ದಾಳೆ ಎಂದು ಮಾವ ಚಿದಾನಂದಪ್ಪ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಆರೋಪಿ ರೂಪಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ