ರಾಜೀನಾಮೆ ಹಿಂಪಡೆದ ಸಿ.ಎಸ್.ಪುಟ್ಟರಾಜು

ಭಾನುವಾರ, 25 ಸೆಪ್ಟಂಬರ್ 2016 (12:29 IST)
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿಗೆ ವಿರೋಧಿಸಿ ಸಂಸದ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಸಿ.ಎಸ್.ಪುಟ್ಟರಾಜು ಹಿಂಪಡೆದಿದ್ದಾರೆ.
 
ಸುಪ್ರೀಂಕೋರ್ಟ್‌ನಲ್ಲಿ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ವಿರೋಧಿಸಿ, ಯಾವುದೇ ಕಾರಣಕ್ಕೂ ರಾಜ್ಯದ ರೈತರಿಗೆ ಅನ್ಯಾಯವಾಗುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಿ.ಎಸ್.ಪುಟ್ಟರಾಜು ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
 
ಸಂಸದ ಪುಟ್ಟರಾಜು ಅವರ ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುವಲ್ಲಿ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಾದೇಗೌಡ ಅವರು ಯಶಸ್ವಿಯಾಗಿದ್ದಾರೆ.
 
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರಕಾರ ಕೈಗೊಂಡಿರುವ ಖಡಕ್ ನಿರ್ಧಾರದ ಹಿನ್ನೆಲೆಯಲ್ಲಿ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಾದೇಗೌಡರ ಒತ್ತಾಯದ ಮೇರೆಗೆ ಸಿ.ಎಸ್.ಪುಟ್ಟರಾಜು ಅವರು ಸಂಸದ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ