ಸಂಸದ ವಿ. ಶ್ರೀನಿವಾಸ ಪ್ರಸಾದ್ ನಿಧನ: ನಾಳೆ ಸರ್ಕಾರಿ ಕಚೇರಿ, ಶಾಲಾ-ಕಾಲೇಜಿಗೆ ರಜೆ ಘೋಷಣೆ

Sampriya

ಸೋಮವಾರ, 29 ಏಪ್ರಿಲ್ 2024 (18:25 IST)
Photo Courtesy X
ಮೈಸೂರು: ಹಿರಿಯ ಬಿಜೆಪಿ ಮುಖಂಡ, ಚಾಮರಾಜನಗರ ಸಂಸದ ವಿ ಶ್ರೀನಿವಾಸ ಪ್ರಸಾದ್(76) ಅವರ ನಿಧನ ಹಿನ್ನೆಲೆ ನಾಳೆ (ಏ 30)ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪೂರ್ವ ನಿಗದಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ ಏ. 30ರಂದು ರಜೆ ಘೋಷಣೆ ಮಾಡಲಾಗಿದೆ.

ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆ್ಯಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ ರಜೆ ಎಂದು ಈ ಕುರಿತಂತೆ ಹೊರಡಿಸಲಾಗಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಯೋಸಹಜ ಕಾಯಿಲೆಯಿಂದ ಏಪ್ರಿಲ್ 27ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀನಿವಾಸ ಪ್ರಸಾದ್ ಅವರು ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.

ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ನೆರವೇರಿಸುವಂತೆ ಸರ್ಕಾರ ಆದೇಶಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ