ಶ್ರೀರಾಮುಲು ಸೂಚಿಸಿದ ಅಭ್ಯರ್ಥಿ ಅಂತಿಮ ಎಂದ ಶಾಸಕ

ಗುರುವಾರ, 11 ಅಕ್ಟೋಬರ್ 2018 (19:02 IST)
ಉಪಚುನಾವಣೆಯಲ್ಲಿ ಶ್ರೀರಾಮುಲು ಸೂಚಿಸಿದ ಅಭ್ಯರ್ಥಿ ಅಂತಿಮಗೊಳ್ಳಲಿದ್ದಾರೆ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿಕೆ ನೀಡಿದ್ದು, ಶ್ರೀರಾಮುಲು ನಮ್ಮ ನಾಯಕರಾಗಿದ್ದಾರೆ.
ಶ್ರೀರಾಮುಲು ಸೂಚಿಸಿದ ಅಭ್ಯರ್ಥಿಯೇ ಬಳ್ಳಾರಿ ಉಪಚುನಾವಣೆಯಲ್ಲಿ ಅಂತಿಮವಾಗಲಿದ್ದಾರೆ ಎಂದರು.

ಕಾಂಗ್ರೆಸ್ ನವರ ರಣತಂತ್ರಗಳು ಬಳ್ಳಾರಿಯಲ್ಲಿ ನಡೆಯುವುದಿಲ್ಲ.  ಕಳೆದ ಚುನಾವಣೆಯಲ್ಲಿ ಶ್ರೀರಾಮುಲು ಸ್ಪರ್ಧಿಸಿದ್ರೆ  ಒಂಭತ್ತು ಕ್ಷೇತ್ರಗಳಲ್ಲಿ ನಮ್ಮ ಗೆಲುವು ಆಗುತ್ತಿತ್ತು. ಈಗ ಶ್ರೀರಾಮುಲು ಬಳ್ಳಾರಿಯಲ್ಲಿ ಇರುತ್ತಾರೆ. ಭಾರೀ ಅಂತರಗಳಿಂದ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ