ಈ ವಿಚಾರಕ್ಕೆ ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಎಂಟಿಬಿ ನಾಗರಾಜ್

ಶುಕ್ರವಾರ, 17 ಜನವರಿ 2020 (11:24 IST)
ಬೆಂಗಳೂರು : ಬಿಜೆಪಿ ಸಂಸದ ಬಚ್ಚೇಗೌಡರ ವಿರುದ್ಧ ಕ್ರಮ ಜರುಗಿಸುವಂತೆ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಆಗ್ರಹಿಸಿದ್ದಾರೆ.



ಇಂದು ಬೆಂಗಳೂರಿನ ಸಿಎಂ ನಿವಾಸಕ್ಕೆ ತೆರಳಿ ಸಿಎಂ ಯಡಿಯೂರಪ್ಪ ಜತೆ ಮಾತುಕತೆ ನಡೆಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಸಿಎಂ ಬಿಎಸ್ ವೈ ಗೆ ಒತ್ತಾಯಿಸುತ್ತಿದ್ದೇನೆ.  ಚುನಾವಣೆ ಮುಗಿದ ದಿನದಿಂದಲೂ ಒತ್ತಾಯ ಮಾಡುತ್ತಿದ್ದೇನೆ.  ಆದ್ರೆ ಅವರ ವಿರುದ್ಧ ಸಿಎಂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಎಂದು  ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ
 
ಹೊರಹಾಕಿದ್ದಾರೆ.


ಅಲ್ಲದೇ ಸಚಿವಸ್ಥಾನ ನೀಡುವಂತೆ ಸಿಎಂ ನಾನು ಒತ್ತಡ ಹಾಕಿಲ್ಲ. ಸಚಿವ ಸ್ಥಾನ ನೀಡದಿದ್ದರೂ ನನಗೆ ಬೇಸರವಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ