ಮುಡಾ ಹಗರಣ: ಸದ್ಯಕ್ಕಿಲ್ಲ ಸಿಎಂ ಸಿದ್ದರಾಮಯ್ಯಗೆ ಸಿಬಿಐ ಸಂಕಷ್ಟ, ಯಾಕೆ ಗೊತ್ತಾ
ನ.25 ರವರೆಗೆ ನಡೆಸುವ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ನಲ್ಲಿ ಮಂಗಳವಾರ ವಿಚಾರಣೆ ನಡೆಸಲಾಯಿತು. ಸದ್ಯ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಅವರು ರಾಜ್ಯ ಸರ್ಕಾರ ಅಧೀನದಲ್ಲಿರುವುದರಿಂದ ನಿಷ್ಪಕ್ಷಪಾತ ತನಿಖೆ ಆಗುವುದಿಲ್ಲ. ಹಾಗಾಗಿ, ತನಿಖೆಯನ್ನು ಸಿಬಿಐಗೆ ವಹಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.