ರಾಜಸ್ಥಾನ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್‌ ಬ್ಯಾಟಿಂಗ್ ಆಯ್ಕೆ

Sampriya

ಸೋಮವಾರ, 22 ಏಪ್ರಿಲ್ 2024 (19:44 IST)
Photo Courtesy X
ಜೈಪುರ:  ಇಂದು ಸವಾಯಿ ಮಾನ್‌ಸಿಂಗ್ ಮೈದಾನದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್‌ ತಂಡ ಮುಖಾಮುಖಿಯಾಗಲಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡು ರಾಜಸ್ಥಾನ ರಾಯಲ್ಸ್ ತಂಡವನ್ನು ಫೀಲ್ಡಿಂಗ್‌ಗೆ ಆಹ್ವಾನಿಸಿದೆ.

ಈಗಾಗಲೇ ನಡೆದಿರುವ  ಮೊದಲ ಸುತ್ತಿನ ಪಂದ್ಯದಲ್ಲಿ ರಾಯಲ್ಸ್ ತಂಡವು ಮುಂಬೈ ತಂಡವನ್ನು ಅದರ ತವರಿನಲ್ಲಿಯೇ ಮಣಿಸಿತ್ತು. ಇದೀಗ ರೀವೆಂಜ್ ತೀರಿಸಿಕೊಳ್ಳಲು ಹಾರ್ದಿಕ್ ಪಾಂಡ್ಯ ನಾಯಕತ್ವದ ಬಳಗಕ್ಕೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಸಂಜು ಸ್ಯಾಮ್ಸನ್ ನಾಯಕತ್ವದ ರಾಯಲ್ಸ್ ತಂಡವು ಆಡಿರುವ ಏಳು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಸೋತು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮುನ್ನುಗ್ಗುತ್ತಿದೆ.  ಆರನೇ ಸ್ಥಾನದಲ್ಲಿರುವ ಮುಂಬೈ ತಂಡವು ಮೂರರಲ್ಲಿ ಮಾತ್ರ ಗೆದ್ದು, ನಾಲ್ಕರಲ್ಲಿ ಸೋತಿದೆ. ‌

ಮುಂಬೈ ಪರ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ಇದು ನೂರನೇ ಪಂದ್ಯ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ