ಅತೃಪ್ತ ಶಾಸಕರ ಮನವೊಲಿಸಲು ಹೋಟೆಲ್ ಗೆ ಬಂದ ಡಿಕೆ ಶಿವಕುಮಾರ್ ರನ್ನು ತಡೆದ ಮುಂಬೈ ಪೊಲೀಸರು

ಬುಧವಾರ, 10 ಜುಲೈ 2019 (10:21 IST)
ಮುಂಬೈ : ಕಾಂಗ್ರೆಸ್, ಜೆಡಿಎಸ್ ಅತೃಪ್ತ ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರು ತಂಗಿದ್ದ ಹೋಟೆಲ್ ಬಳಿಗೆ ಸಚಿವ ಡಿಕೆ ಶಿವಕುಮಾರ್ ಅವರು ಆಗಮಿಸಿದ್ದು, ಆದರೆ ಈ ವೇಳೆ ಡಿಕೆಶಿ ಅವರನ್ನು ಪೊಲೀಸರು ಹೋಟೆಲ್ ಒಳಗಡೆ ಬಿಡಲು ನಿರಾಕರಿಸಿದ್ದಾರೆ.




ಅತೃಪ್ತ ಶಾಸಕರು ಮುಂಬೈನ ರಿನೈಸೆನ್ಸ್ ಹೋಟೆಲ್ ನಲ್ಲಿ ತಂಗಿದ್ದರಿಂದ ಅವರ ಮನವೊಲಿಸಲು ಸಚಿವ ಡಿಕೆ ಶಿವಕುಮಾರ್, ಶಿವಲಿಂಗೇಗೌಡ, ಜಿಟಿ ದೇವೆಗೌಡರು ಹೋಟೆಲ್ ಬಳಿಗೆ ಆಗಮಿಸಿದ್ದರು. ಈ ವೇಳೆ ಅವರನ್ನು ತಡೆದ ಪೊಲೀಸರು ನಿಮ್ಮ ಹೆಸರಲ್ಲಿ ರೂಮ್ ಬುಕ್ ಆಗಿದ್ದರೆ ಮಾತ್ರ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ.


ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ನನ್ನ ಸ್ನೇಹಿತರು ಈ ಹೋಟೆಲ್‍ ನಲ್ಲಿದ್ದಾರೆ. ಅವರನ್ನು ಭೇಟಿ ಮಾಡಲು ಬಂದಿದ್ದೇನೆ ಹೊರತು ಯಾರಿಗೂ ನಾನು ಬೆದರಿಕೆ ಹಾಕಲು ಬಂದಿಲ್ಲ. ಹೋಟೆಲ್ ಒಳಗೆ ಬಿಡದಿದ್ದರೆ ಇಡೀ ದಿನ ಇಲ್ಲೇ ಕಾಯ್ತೀನಿ ಎಂದು ಹೇಳಿದ್ದಾರೆ.

 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ