ಕಾಂಗ್ರೆಸ್ ಮುಖಂಡನ ಮನೆಗೆ ನುಗ್ಗಿದ ರೌಡಿಶೀಟರ್ ನಿಂದ ಕೊಲೆ ಯತ್ನ

ಶುಕ್ರವಾರ, 29 ನವೆಂಬರ್ 2019 (18:10 IST)
ಮನೆಗೆ ನುಗ್ಗಿ ಕಾಂಗ್ರೆಸ್ ಮುಖಂಡನ ಕೊಲೆಯತ್ನ ನಡೆಸಿರೋ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೇರಮಜಲು ಎಂಬಲ್ಲಿ ಘಟನೆ ನಡೆದಿದೆ.  

ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಮೇರಮಜಲು ಗ್ರಾಮ ಪಂಚಾಯತಿ ಸದಸ್ಯ ಯೋಗೀಶ್ ಪ್ರಭು ಅವರ ಕೊಲೆಯತ್ನ ನಡೆದಿದೆ.

ಹಲ್ಲೆಯನ್ನು ತಡೆಯಲು ಬಂದ ಪತ್ನಿ ಶೋಭಾ ಮೇಲೂ ಹಲ್ಲೆ ನಡೆಸಲಾಗಿದೆ. ಯೋಗೀಶ್ ಗಂಭೀರ ಸ್ಥಿತಿಯಲ್ಲಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳೀಯ ರೌಡಿಶೀಟರ್ ಪ್ರಸಾದ್ ಬೆಳ್ಚಡ ತಂಡದಿಂದ ಹಲ್ಲೆ ನಡೆದಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ